ಯಾದವ ಸಭಾ ಬೆಟ್ಟ ಪ್ರಾದೇಶಿಕ ಸಮಿತಿಯ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

0

ಯಾದವ ಸಭಾ ಬೆಟ್ಟ
ಪ್ರಾದೇಶಿಕ ಸಮಿತಿಯ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಬೊಳ್ಳಾಜೆ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಾದವ ಸಭಾ ಬೆಟ್ಟ ಪ್ರಾದೇಶಿಕ ಸಮಿತಿ ಯ ಅಧ್ಯಕ್ಷ ಚಂದ್ರಹಾಸ ಕೀಲಾರ್ಕಜೆ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರು ಹಿರಿಯರಾದ ರಾಧಾಕೃಷ್ಣ ನಾಯಕ್ ಬೊಳ್ಳಾಜೆ ನೆರವೇರಿಸಿದರು.

ವೈದ್ಯರಾದ ಡಾ. ಜಯಪ್ರಸಾದ್ ಪಾರೆ ಕಲಶ ಅರಳಿಸುವುದರ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದರಾದ ಮಹೇಶ್ ಮಣಿಯಾಣಿ ಇಂತಿಕಲ್ಲು ಹಳೆಯ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೊಳ್ಳಾಜೆ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲ ಎ.ವಿ., ಒಡಿಯೂರು ಗ್ರಾಮ ವಿಕಾಸ ಯೋಜನೆಯ ಬೊಳ್ಳಾಜೆ ಘಟ ಸಮಿತಿಯ ಅಧ್ಯಕ್ಷರಾದ ಸೀತಾರಾಮ ಚೆನ್ನಡ್ಕ ಉಪಸ್ಥಿತರಿದ್ದರು. ‌

ಯಾದವ ಸಭಾ ಬೆಟ್ಟ ಪ್ರಾದೇಶಿಕ ಮಹಿಳಾ ವೇದಿಕೆಯ ಜತೆ ಕಾರ್ಯದರ್ಶಿ ಶ್ರೀಮತಿ ಸವಿತಾ ಚಂದ್ರಹಾಸ ಕಿಲಾರ್ ಕಜೆ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಆರತಿ ಉಮೇಶ್ ಕಿಲಾರ್ ಕಜೆ ವಂದಿಸಿದರು.