ಸುಬ್ರಹ್ಮಣ್ಯ: ಚಿನ್ನ ಕಳ್ಳತನ

0

ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಯೊಂದರಲ್ಲಿ ಚಿನ್ನ ಕಳ್ಳತನ ಪ್ರಕರಣ ನಡೆದಿರುವುದಾಗಿ ವರದಿಯಾಗಿದೆ.

ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದು ಇಂದು ಸಂಜೆ ಮನೆಗೆ ವಾಪಾಸ್ಸಾದಾಗ ಚಿನ್ನ, ಬೆಳ್ಳಿ, ನಗದು ಕಳ್ಳತನ ಆಗಿರುವುದು ಗಮನಕ್ಕೆ ಬಂದಿರುವುದಾಗಿ ತಿಳಿದುಬಂದಿದೆ. ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತಿರುವುದಾಗಿ ತಿಳಿದು ಬಂದಿದೆ.