ಮಣಿಪುರ ಪ್ರಕರಣಕ್ಕೆ ತೀವ್ರ ಖಂಡನೆ

0

ಸುಳ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ಮೌನ ಪ್ರತಿಭಟನೆ

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲಾಗಿಸಿದ ಪ್ರಕರಣವನ್ನು ಖಂಡಿಸಿ ಸುಳ್ಯದಲ್ಲಿ ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ಸುಳ್ಯ ತಾಲೂಕು ನೇತೃತ್ವದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಚರ್ಚ್ ಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿತು.

ಸುಳ್ಯದ ಖಾಸಗಿ ಬಸ್ ನಿಲ್ದಾಣದಿಂದ ಆರಂಭಗೊಂಡ ಮೌನ ಮೆರವಣಿಗೆ ಸುಳ್ಯ ತಾಲೂಕು ಕಚೇರಿಯ ಎದುರುಗಡೆ ಪ್ರತಿಭಟನೆ ನಡೆಸಿತು.

ಫಾದರ್ ವಿಕ್ಟರ್ ಡಿಸೋಜಾ, ಫಾದರ್ ಕ್ರಿಸ್ಟಿ ಪರಿವಾರಕಾನ ಸೇರಿದಂತೆ ಅನೇಕ ಕಾರ್ಯಕರ್ತರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.