ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ, ಧನ ಸಹಾಯ ನೀಡಿಕೆ

0

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಪ್ರಥಮ ಮಾಸಿಕ ಸಭೆ ಆ. 5ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜನಾರ್ಧನ ಬಿ. ಕುರುಂಜಿಭಾಗ್ ರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಸ್ವಾಗತಿಸಿದರು. ಸಂಘದ ಸದಸ್ಯರಾಗಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಚೆನ್ನಕೇಶವರಿಗೆ ರೂ. 5000/- ಧನ ಸಹಾಯ ನೀಡಿದರು.

ಕಾರ್ಯಕಾರಿ ಸಮಿತಿಗೆ ನೂತನ ಸದಸ್ಯರಾಗಿ ಆಯ್ಕೆಯಾದ ಶ್ರೀಮತಿ ರಾಜೇಶ್ವರಿ ಮತ್ತು ರಘುನಾಥ್ ಜಟ್ಟಿಪಳ್ಳರನ್ನು ಸ್ವಾಗತಿಸಿ, ಕಾರ್ಯಕಾರಿ ಸಮಿತಿಯಿಂದ ನಿರ್ಗಮಿಸಿದ ಶ್ರೀಮತಿ ಶೋಭ ಎ.ಕೆ. ನಾಯ್ಕರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಸಂಘದ ಗೌರವಾಧ್ಯಕ್ಷ ಸೀತಾನಂದ ಬೇರ್ಪಡ್ಕ, ಉಪಾಧ್ಯಕ್ಷ ಎನ್. ಐತ್ತಪ್ಪ, ಕೋಶಾಧಿಕಾರಿ ಜನಾರ್ಧನ ನಾಯ್ಕ್ ಕೇರ್ಪಳ, ಜತೆ ಕಾರ್ಯದರ್ಶಿ ಧರ್ಮಣ್ಣ ನಾಯ್ಕ್, ಕ್ರೀಡಾ ಕಾರ್ಯದರ್ಶಿ ರಘುನಾಥ ಜಟ್ಟಿಪಳ್ಳ, ಕಾರ್ಯಕಾರಿ ಸಮಿತಿ ಸದಸ್ಯರಾದ ಭವಾನಿಶಂಕರ ಕಲ್ಮಡ್ಕ, ನಿತ್ಯಾನಂದ ಕುಡೆಂಬಿ, ಸುಲೋಚನಾ ನಾರಾಯಣ, ರಾಜೇಶ್ವರಿ, ಸಂಘದ ಮೇಲ್ವಿಚಾರಕ ಪುನೀತ್ ಮುಂಡಕಜೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.