ಸುಳ್ಯ ಗುರುಂಪು ಬಳಿ ರಸ್ತೆ ದಾಟುತ್ತಿದ್ದ ದನಕ್ಕೆ ಬೈಕ್ ಡಿಕ್ಕಿ -ಸವಾರ ಜಖಂ, ಆಸ್ಪತ್ರೆಗೆ ದಾಖಲು

0

ಸುಳ್ಯ ಗಾಂಧಿನಗರದಿಂದ ಆಲೆಟ್ಟಿ ಸಂಚರಿಸುವ ರಸ್ತೆಯ ಗುರುಂಪು ಎಂಬಲ್ಲಿ ಬೈಕೊಂದು ದನಕ್ಕೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ.
ಆಲೆಟ್ಟಿ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಬೈಕ್ ಗುರುಂಪು ಬಳಿ ತಲುಪುತ್ತಿದ್ದಂತೆ ದನವೊಂದು ಅಡ್ಡ ಬಂದ ಪರಿಣಾಮ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ರಸ್ತೆಗೆ ಬಿದ್ದು ಗಾಯಗೊಂಡರು. ಸ್ಥಳೀಯ ಯುವಕರು ಸೇರಿ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಬೈಕ್ ಹೊಡೆದ ರಭಸಕ್ಕೆ ದನ ಬಿದ್ದು ರಸ್ತೆಯಲ್ಲಿ ಒದ್ದಾಡುತ್ತಿರುವ ಕುರಿತು ವಿಷಯ ತಿಳಿದ ಬಜರಂಗದಳ ಕಾರ್ಯಕರ್ತರು ಬಂದು ಪಶು ವೈದ್ಯಾಧಿಕಾರಿಗೆ ತಿಳಿಸಿದರು. ತಕ್ಷಣ ಸ್ಪಂದಿಸಿದ ಪಶು ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ರವರು ಡಾ.ದೇವರಾಜ್ ರವರನ್ನು ಸ್ಥಳಕ್ಕೆ ಕಳುಹಿಸಿದರು. ವೈದ್ಯರು ಬಂದು ಪರೀಕ್ಷಿಸಿ ದನಕ್ಕೆ ಶುಶ್ರೂಷೆ ಮಾಡಿದ ನಂತರ ಆಸ್ಪತ್ರೆಯ ಆವರಣಕ್ಕೆ ಬಜರಂಗದಳ ಕಾರ್ಯಕರ್ತರು ವಾಹನದಲ್ಲಿ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.