ಕಳಂಜ ಗ್ರಾ.ಪಂ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನಾ ಸಭೆ

0

ಕಳಂಜ ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಬಾಲಕೃಷ್ಣ ಬೇರಿಕೆ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಪ್ರೇಮಲತಾರಿಗೆ ಅಭಿನಂದನಾ ಸಭೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ, ಉಪಾಧ್ಯಕ್ಷ ಗಣೇಶ್ ರೈ, ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಾಲಕೃಷ್ಣ ಬೇರಿಕೆ, ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಪ್ರೇಮಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು, ಉಪಾಧ್ಯಕ್ಷ ಅಜಿತ್ ರಾವ್ ಕಿಂಗೋಡಿ, ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಕುಮಾರ್ ಸ್ವಾಗತಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಉಪಾಧ್ಯಕ್ಷ ಗಣೇಶ್ ರೈ ಅಭಿನಂದನಾ ಮಾತುಗಳನ್ನಾಡಿ ವಂದಿಸಿದರು. ಸುಳ್ಯ ಮಂಡಲ ಕಾರ್ಯದರ್ಶಿ ಶ್ರೀನಾಥ್ ರೈ ಬಾಳಿಲ, ಬಾಳಿಲ ಗ್ರಾ.ಪಂ. ಸದಸ್ಯ ರವೀಂದ್ರ ರೈ ಟಪ್ಪಾಲುಕಟ್ಟೆ, ಮಾಜಿ ಅಧ್ಯಕ್ಷ ಅನಂತಕೃಷ್ಣ ತಂಟೆಪ್ಪಾಡಿ, ತಿಲಕ್ ತಂಟೆಪ್ಪಾಡಿ, ಬಾಲಕೃಷ್ಣ ಮುಂಡುಗಾರು, ವೆಂಕಟ್ರಮಣ ಬೇರಿಕೆ, ಪ್ರಸಾದ್ ತಂಟೆಪ್ಪಾಡಿ, ಹರೀಶ್ ಕಳಂಜ, ಪ್ರವೀಣ್ ಮಣಿಮಜಲು, ರಾಜ್ ಕುಮಾರ್ ತಂಬಿನಮಕ್ಕಿ, ಪಂಚಾಯತ್ ಸದಸ್ಯರಾದ ಶ್ರೀಮತಿ ಸುಧಾ, ಶ್ರೀಮತಿ ಕಮಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದಿಸಿದರು.