ಸುಳ್ಯ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

0

ಪ್ರಾಥವಿಕ ಆರೋಗ್ಯ ಕೇಂದ್ರ,ಬೆಳ್ಳಾರೆ ಅಂಗನವಾಡಿ ಕೇಂದ್ರ ಗಾಂಧಿನಗರ, ಮತ್ತು ಶುಭಶ್ರೀ ಮಹಿಳಾ ಮಂಡಲ ಗಾಂಧಿನಗರ ಇದರ ಸಂಯುಕ್ತ ಆಶ್ರಯ ದಲ್ಲಿ “ಸ್ತನ್ಯಪಾನ ಸಪ್ತಾಹ” ಕಾರ್ಯಕ್ರಮವು ಅಂಗನವಾಡಿ ಕೇಂದ್ರ ಗಾಂಧಿನಗರದಲ್ಲಿ ನಡೆಯಿತು.


ಬೆಳ್ಳಾರೆ ಆರೋಗ್ಯ ಕೇಂದ್ರದ ಶುಶ್ರೂಷಕಿ ಶ್ರೀಮತಿ ಕನಕಾಂಗಿ ಮತ್ತು ಕಾವ್ಯ, ಸಮುದಾಯ ಆರೋಗ್ಯ ಅಧಿಕಾರಿ, ಆರೋಗ್ಯ ಕ್ಷೇಮ ಕೇಂದ್ರ ಇವರು ಸ್ತನ್ಯಪಾನದ ಮಹತ್ವವನ್ನು ತಿಳಿಸಿಕೊಟ್ಟರು.


ಶುಭಶ್ರೀ ಮಹಿಳಾ ಮಂಡಲದ ಸದಸ್ಯರು ಮತ್ತು ಬಾಲವಿಕಾಸ ಸೇವಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ವನಿತಾ, ಆಡಳಿತ ಮಂಡಳಿಯ ಸದಸ್ಯರಾದ ಜೆ.ಕೆ.ರೈ ಮತ್ತು ಶರೀಫ್ ಕಂಠಿಯವರು ಉಪಸ್ಥಿತರಿದ್ದರು.


ಶುಭಶ್ರೀ ಮಹಿಳಾ ಮಂಡಲದ ಅದ್ಯಕ್ಷೆ ಶ್ರೀಮತಿ ಶಶಿಕಲಾ ಹರಪ್ರಸಾದ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಅಂಗನವಾಡಿ ಕೇಂದ್ರ ದ ಸಹಾಯಕಿ ಶ್ರೀಮತಿ ಪುಷ್ಪ, ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.ಮಹಿಳಾ ಮಂಡಲದ ಸದಸ್ಯೆ ಶ್ರೀಮತಿ ಶೋಭಾರವರು ಸ್ವಾಗತಿಸಿ ಸದಸ್ಯೆ ಶ್ರೀಮತಿ ಸುನಂದಾ ಶೆಟ್ಟಿ ಯವರು ವಂದಿಸಿದರು.