ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

0

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆ 11 ರಂದು ಸುಳ್ಯದ ಶಿವಕೃಪಾ ಕಲಾ ಮಂದಿರದ ಸಭಾ ಭವನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸುಳ್ಯ ತಾಲೂಕಿನ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾಯಿತರಾದ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ವಿಚಾರದಲ್ಲಿ ಆದ ಗೊಂದಲದ ಬಗ್ಗೆ ನಾಯಕರಾದ ಸೋಮಶೇಖರ್ ಕೊಯಿಂಗಾಜೆ ವಿಚಾರ ಪ್ರಸ್ತಾಪಿಸಿ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿದ್ದ ಎಲ್ಲಾ ಮುಖಂಡರುಗಳು ಒಕ್ಕೊರಳಿನಿಂದ ನಮ್ಮ ಪಕ್ಷದ ತೀರ್ಮಾನಕ್ಕೆ ವಿರುದ್ಧ ಮತ ಚಲಾಯಿಸಿದವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಒತ್ತಾಯಿಸಿದರು.

ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಬಗ್ಗೆ ಪ್ರತೀ ಗ್ರಾಮ ಮಟ್ಟದಲ್ಲಿ ಪಕ್ಷದ ನೆಲೆಯಲ್ಲಿ ಕಾರ್ಯಕರ್ತರು ಕಾರ್ಯಕ್ರಮ ಹಾಕಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು. ಸುಳ್ಯ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ನಿಯಂತ್ರಣದ ಬಗ್ಗೆ ಚರ್ಚಿಸಲಾಗಿ ಸಭೆಯ ನಂತರ ಸುಳ್ಯ ಪೋಲೀಸ್ ಠಾಣೆಗೆ ತೆರಳಿ ಉಪ ನಿರೀಕ್ಷಕರನ್ನು ಭೇಟಿಯಾಗಿ ಆದಷ್ಟು ಬೇಗ ಪ್ರಕರಣ ಭೇದಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಮನವಿ ಮಾಡುವುದಾಗಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಪಕ್ಷದ ನಾಯಕರುಗಳಾದ ಸೋಮಶೇಖರ್ ಕೊಯಿಂಗಾಜೆ, ಮಹಮ್ಮದ್ ಪವಾಜ್, ಆಬುಸಾಲಿ ಗೂನಡ್ಕ, ಮಹಮ್ಮದ್ ಕುಂಞಿ ಗೂನಡ್ಕ,ನಂದರಾಜ್ ಸಂಕೇಶ ,ಲಕ್ಷ್ಮಣ ಗೌಡ ಬೋಳ್ಳಾಜೆ , ಲೋಕೇಶ್ ಅಕ್ರಿಕಟ್ಠೆ, ಕಳಂಜ ವಿಶ್ವನಾಥ ರೈ, ರಾಧಾಕೃಷ್ಣ ಪರಿವಾರಕಾನ, ಮಜೀದ್ ಜಾಲ್ಸೂರು, ತಿಮ್ಮಯ್ಯ ತೊಡಿಕಾನ, ಸದಾನಂದ ಮಾವಜಿ, ಧನಂಜಯ ಅಡ್ಪಂಗಾಯ, ಅಶೋಕ್ ಚೂಂತಾರು, ವಿಜಯಕುಮಾರ್ ಕನಕಮಜಲು ಮೊದಲಾದವರು ಪಕ್ಷದ ಸಂಘಟನೆ ವಿಚಾರದಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ ಸ್ವಾಗತಿಸಿ ವಂದಿಸಿದರು.