ಆ.14 :ವಿಶ್ವಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಸುಳ್ಯದಲ್ಲಿ ಪಂಜಿನ ಮೆರವಣಿಗೆ

0

ಸುಳ್ಯ ವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ಆ. 14 ರ ಸಂಜೆ ಸುಳ್ಯದಲ್ಲಿ ಬೃಹತ್ ಪಂಜಿನ ಮೆರವಣಿಗೆಯು ಮತ್ತು ಅಖಂಡ ಭಾರತ ಸಂಕಲ್ಪ ದಿನದ ಕಾರ್ಯಕ್ರಮ ನಡೆಯಲಿರುವುದು.

ಸುಳ್ಯದ ಶಾಸ್ತ್ರಿ ವೃತ್ತದ ಬಳಿ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರಮೇಲು ರವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮೆರವಣಿಗೆಯು ಸುಳ್ಯದ ಮುಖ್ಯ ರಸ್ತೆಯ ಲ್ಲಿ ಸಾಗಿ ಬಂದು ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಸಭಾ ಕಾರ್ಯಕ್ರಮ ನಡೆಯಲಿರುವುದು.

ನಿವೃತ ಸೈನಿಕ ಲೋಕೇಶ್ ಇರಂತಮಜಲು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಭಾಗದ ಸಹ ಸಂಯೋಜಕ ಶಿವಪ್ರಸಾದ್ ಮಲೆಬೆಟ್ಟು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.