ಆ.14ರಂದು: ನಾಳೆ ಸಂಜೆ ಜಾಲ್ಸೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

0

ಹರಿಣಿ ಪುತ್ತೂರಾಯ ಅವರಿಂದ ದಿಕ್ಸೂಚಿ ಭಾಷಣ

ಜಾಲ್ಸೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮವು ಆ.14ರಂದು ಸಂಜೆ ಜಾಲ್ಸೂರಿನಲ್ಲಿ ನಡೆಯಲಿದೆ.

ಆ.14ರಂದು ಸಂಜೆ ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ಜಾಲ್ಸೂರಿನ ಪೇಟೆಯ ತನಕ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆಯು ಸಾಗಿ ಬರಲಿದ್ದು, ಜಾಲ್ಸೂರಿನಲ್ಲಿ ಜರುಗುವ ಸಭಾ ಕಾರ್ಯಕ್ರಮದಲ್ಲಿ ತಿಮ್ಮಯ್ಯ ಆಚಾರ್ಯ ಜಾಲ್ಸೂರು ಅವರು ಸಭಾ ಅಧ್ಯಕ್ಷತೆ ವಹಿಸಲಿದ್ದಾರೆ.

ಹರಿಣಿ ಪುತ್ತೂರಾಯ ಅವರು ದಿಕ್ಸೂಚಿ ಭಾಷಣ ಮಾಡಲಿದ್ದು, ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಮಿತಿ ಸದಸ್ಯರಾದ ಚಿನ್ಮಯ್ ಈಶ್ವರಮಂಗಲ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.