ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತೊಡಿಕಾನ ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತೆ ಕಾರ್ಯ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತೊಡಿಕಾನ ಕೂಟದ ವತಿಯಿಂದ “ಶ್ರದ್ಧಾ ಕೇಂದ್ರದ ಸ್ವಚ್ಛತೆ” ಕಾರ್ಯಕ್ರಮದಡಿಯಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ವಠಾರದಲ್ಲಿ ಸ್ವಚ್ಛತಾ ಕಾರ್ಯವನ್ನು ಆ. 13ರಂದು ನಡೆಯಿತು.

ತೊಡಿಕಾನ ಒಕ್ಕೂಟದ ಪದಾಧಿಕಾರಿಗಳು, ಸಂಘಗಳ ಪದಾಧಿಕಾರಿಗಳು ಮತ್ತು ಸಂಪಾಜೆ ವಲಯದ ಅಧ್ಯಕ್ಷರಾದ ಹೂವಯ್ಯ ತೊಡಿಕಾನ ಗ್ರಾಮದ ಸೇವಾ ಪ್ರತಿನಿಧಿ ಸುಂದರ ಬಾಜಿನಡ್ಕ, ಉಪಸ್ಥಿತರಿದ್ದರು.

ಶ್ರೀ ಮಲ್ಲಿಕಾರ್ಜುನ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಯುತ ಪಿ .ಬಿ ದಿವಾಕರ ರೈ ಯವರು ಮತ್ತು ಸದಸ್ಯರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿರುವ ಶ್ರೀಯುತ ಕಿಶೋರ್ ಕುಮಾರ್ ಉಳುವಾರು ಮತ್ತು ಸದಸ್ಯರು ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿಯ ಅಧ್ಯಕ್ಷ ಎ .ಎಸ್ ಚಂದ್ರಶೇಖರ ಆಚಾರ್ಯ ತೊಡಿಕಾನ ಮತ್ತು ಗ್ರಾಮ ಪಂಚಾಯತ್ ಸದಸ್ಯರಾಗಿರುವ ರವೀಂದ್ರ ಪೂಜಾರಿ ಪಂಜಿಕೋಡಿ,ದೇವಾಲಯದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.