ಗುತ್ತಿಗಾರು : ರಕ್ತದಾನ ಮತ್ತು ಸನ್ಮಾನ ಕಾರ್ಯಕ್ರಮ

0

76 ನೇ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ಮಂಗಳೂರು, ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಅರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್ ಹಿರಿಯಡ್ಕ ವತಿಯಿಂದ ರಕ್ತದಾನ ಶಿಬಿರ ಆ.13 ರಂದು ಗುತ್ತಿಗಾರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ರೆಡ್ ಕ್ರಾಸ್ ಸಭಾಪತಿ ಪಿ. ಬಿ. ಸುಧಾಕರ್ ರೈ, ಪಿ.ಎ.ಸಿ ಬ್ಯಾಂಕ್ ಗುತ್ತಿಗಾರು ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ ವಳಲಂಬೆ, ಪಿ. ಎ. ಸಿ. ಬ್ಯಾಂಕ್ ಗುತ್ತಿಗಾರು ನಿರ್ದೇಶಕ ಮುಳಿಯ ಕೇಶವ ಭಟ್, ಅಭಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ನೆಕ್ರಾಜೆ,
ಪಿ. ಡಿ. ಓ.ಧನಪತಿ, ಲಯನ್ಸ್ ಕ್ಲಬ್ ಹಿರಿಯಡ್ಕ ಅಧ್ಯಕ್ಷ ಮೋಹನ್ ಆಚಾರ್ಯ, ಶ್ರೀಮತಿ ಪುಷ್ಪಾವತಿ ದೇವಿದಾಸ್ ಬುಡ್ಲೆಗುತ್ತು ಅವರುಗಳು ಜೊತೆಯಾಗಿ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಅರೋಗ್ಯ ಇಲಾಖಾ ವತಿಯಿಂದ ಆಶಾ ಕಾರ್ಯಕರ್ತೆಯರಾದ ಕುಸುಮಾವತಿ ಮತ್ತು ಜಯಲಕ್ಷ್ಮಿ ಬಳ್ಳಕ, ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಅಕ್ಷಯ್ ಯೋಗೀಶ್ ಹೊಸೋಳಿಕೆ ಕಾರ್ಯಕ್ರಮ ನಿರೂಪಿಸಿದರು. ಹವೀಕ್ಷ ಯಸ್. ಆರ್. ಪ್ರಾರ್ಥಿಸಿದರು.
ರಕ್ತದಾನ ಮಾಡಿದ 64 ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ರಕ್ತದಾನ ಶಿಬಿರದಲ್ಲಿ ವಿಶೇಷವಾಗಿ ಯುವ ಸಮುದಾಯ ಪ್ರಥಮ ಬಾರಿಗೆ ರಕ್ತದಾನಿಗಳಾದರು. ಎ.ಓ.ಎಲ್ ಇ. ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ. ಸಿ, ಉಡುಪಿ ನಗರಸಭೆ ಜೂನಿಯರ್ ಎಂಜಿನಿಯರ್ ದಿವಾಕರ ಕೊಂಬೆಟ್ಟು ಸಹಕಾರ ನೀಡಿದ್ದರು.