ಸುಬ್ರಹ್ಮಣ್ಯಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಆಟಿದ ಪರ್ಬ ಕಾರ್ಯಕ್ರಮ

0

ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಆಟಿದ ಪರ್ಬ ಕಾರ್ಯಕ್ರಮ ಆ.14 ರಂದು ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ‌ಕಾರ್ಯಕ್ರಮವನ್ನು ಹಿಂಗಾರ ಅರಳಿಸಿ, ಚೆನ್ನಮಣೆ ಆಡುವ ಮೂಲಕ ಉದ್ಘಾಟಿಸಿದರು. ಬಾಳೆಯ ದಿಂಡಿನಿಂದ ಅಲಂಕೃತ ದೀಪವನ್ನು ಬಾಳೆದಿಂಡಿನಿಂದ ತಯಾರಿಸಿದ ಆರತಿಯಲ್ಲಿ ಉದ್ಘಾಟಿಸಲಾಯಿತು.


ಪ್ರೌಢಶಾಲಾ ವಿಭಾಗದ ಮುಖ್ಯಗುರು ಕೆ.ಯಶವಂತ ರೈ ಪ್ರಮುಖ ಭಾಷಣ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಮಾವಿನಕಟ್ಟೆ, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್ ಆರ್, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವೇದಿಕೆಯಲ್ಲಿದ್ದರು. ಪ್ರಥಮ ಕಲಾ ವಿಭಾಗದ ಮೌಲ್ಯ ಸ್ವಾಗತಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ಞಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ತಂಡದ ಸಹಸಂಚಾಲಕ ರತ್ನಾಕರ ಸುಬ್ರಹ್ಮಣ್ಯ ವಂದಿಸಿದರು.