ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

0

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನಡೆಯಿತು.
ನಿವೃತ್ತ ಯೋಧರಾದ ಗಣೇಶ್ ಬದಂತ್ತಡ್ಕ ಧ್ವಜಾರೋಹಣ ನೆರವೇರಿಸಿದರು.


ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ನಿವೃತ್ತ ಯೋಧ ಗಣೇಶ್ ಬದಂತ್ತಡ್ಕ, ಸ್ವಚ್ಛತಾನಿರತರಾದ, ಬಾಲಕೃಷ್ಣ ಮಡ್ತಿಲ,ಮುರಳೀಧರ ಕೊಚ್ಚಿರವರನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಗ್ರಾ.ಪಂ.ನಿಯೋಜಿತ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ,ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ಉಪಸ್ಥಿತರಿದ್ದರು.


ಅಮಿತ ಮತ್ತು ಬಳಗದವರು ಪ್ರಾರ್ಥಿಸಿ, ಪಂಚಾಯತ್ ಪಿ.ಡಿ.ಒ ಶ್ಯಾಮ್ ಪ್ರಸಾದ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.

ಸಭಾ ಕಾರ್ಯಕ್ರಮ ನಡೆದ ಬಳಿಕ “ಕೋಟಿ ವೃಕ್ಷ ಅಭಿಯಾನ” ಹಾಗೂ “ಮೇರಿ ಮಿಟ್ಟಿ ಮೇರಾ ದೇಶ್” ಚಟುವಟಿಕೆಯಡಿ ಗಿಡನೆಡುವ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು,ಗ್ರಾಮಸ್ಥರು ಉಪಸ್ಥಿತರಿದ್ದರು.ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.