ಸುಳ್ಯ ಮರಾಟಿ ಸಂಘದ ಆಶ್ರಯದಲ್ಲಿ ಧ್ವಜಾರೋಹಣ

0

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಜನಾರ್ಧನ್ ಬಿ. ಕುರುಂಜಿಭಾಗ್ ಧ್ವಜಾರೋಹಣಗೈದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಣ್ಯರನ್ನು ಸ್ಮರಿಸಿದರು.

ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಜನಾರ್ಧನ ನಾಯ್ಕ್ ಕೇರ್ಪಳ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜಾ ಜನಾರ್ಧನ್, ನಿವೃತ್ತ ಬಿ.ಎಸ್.ಎನ್.ಎಲ್. ಅಧಿಕಾರಿ ಜನಾರ್ಧನ ನಾಯ್ಕ್ ಕೊಡಿಯಾಲಬೈಲು, ಸಂಘದ ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ರಾಜೇಶ್ವರಿ, ಮೀನಾಕ್ಷಿ ಭಸ್ಮಡ್ಕ, ರೇವತಿ ದೊಡ್ಡೇರಿ, ಯುವ ವೇದಿಕೆಯ ಅಧ್ಯಕ್ಷ ಮೋಹನ್ ಪೆರಾಜೆ, ಕಾರ್ಯದರ್ಶಿ ಉದಯಕುಮಾರ್ ಮಾಣಿಬೆಟ್ಟು, ಶುಭಾಷ್, ಸವಿತಾ ಶುಭಾಷ್, ಗೀತಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.