ಆಲೆಟ್ಟಿ ಯುವಕ ಮಂಡಲದ ವತಿಯಿಂದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ

0

ಪಂ.ಅಭಿವೃದ್ಧಿ ಅಧಿಕಾರಿ ದಯಾನಂದ ಪತ್ತುಕುಂಜ ರಿಗೆ ಉತ್ತಮ ಜನಸೇವಕ ಪ್ರಶಸ್ತಿ ಪುರಸ್ಕಾರ

ಯುವಕ ಮಂಡಲ ಆಲೆಟ್ಟಿ ,ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಜನನಿ ಫ್ರೆಂಡ್ಸ್ ಕ್ಲಬ್ ಗುಂಡ್ಯ,
ಕಸ್ತೂರಿ ಬಾ ಮಹಿಳಾ ಮಂಡಲ ಆಲೆಟ್ಟಿ, ಸುದ್ದಿ ಮಾಧ್ಯಮ ಸುಳ್ಯ ಇದರ ಜಂಟಿ ಸಹಯೋಗದಲ್ಲಿ ಆಲೆಟ್ಟಿ ಯುವಕ ಮಂಡಲದ ವಠಾರದಲ್ಲಿ ಸ್ವಾತಂತ್ರೋತ್ಸವದ ಆಚರಣೆಯನ್ನು ಆ.15 ರಂದು ಸಂಭ್ರಮದಿಂದ ಆಚರಿಸಲಾಯಿತು.

ಸುಳ್ಯದ ಉದ್ಯಮಿಗಳು, ಪ್ರಗತಿಪರ ಕೃಷಿಕರಾದ ಅಶೋಕ್ ಪ್ರಭು ರವರು ಧ್ವಜಾರೋಹಣ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಯುವಕ ಮಂಡಲದ ಉಪಾಧ್ಯಕ್ಷ ಗುರುರಾಜ್ ಭಟ್ ಎಲಿಕ್ಕಳ ವಹಿಸಿದ್ದರು.
ಈ ಸಂದರ್ಭದಲ್ಲಿ ಉತ್ತಮ ಜನಸೇವಕ ಪ್ರಶಸ್ತಿಗೆ ಪುರಸ್ಕೃತರಾದ ಅಮರಮುಡ್ನೂರು ಪಂಚಾಯತ್ ಪಿ.ಡಿ.ಒ ದಯಾನಂದ ಪತ್ತುಕುಂಜ ರವರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ವೇದಿಕೆಯಲ್ಲಿ ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಪಂಚಾಯತ್ ಸದಸ್ಯೆ ವೀಣಾಕುಮಾರಿ ಆಲೆಟ್ಟಿ, ಕಸ್ತೂರಿ ಬಾ ಮಹಿಳಾ ಮಂಡಲದ ಅಧ್ಯಕ್ಷೆ ಯಶೋಧ ಕುಡೆಕಲ್ಲು, ಜನನಿ ಫ್ರೆಂಡ್ಸ್ ಕ್ಲಬ್ ಉಪಾಧ್ಯಕ್ಷ ನಿತಿನ್ ಗುಂಡ್ಯ, ಸುದ್ದಿ ವರದಿಗಾರ ಯುವಕ ಮಂಡಲದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.
ಯುವಕ ಮಂಡಲದ ಸದಸ್ಯ ಶರತ್ ಕುಡೆಕಲ್ಲು ವಂದಿಸಿದರು.
ಸಂ. ಕಾರ್ಯದರ್ಶಿ ಪ್ರವೀಣ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು, ಯುವಕ ಮಂಡಲದ ಸದಸ್ಯರು, ಮಹಿಳಾ ಮಂಡಲದ ಸದಸ್ಯರು, ಜನನಿ ಫ್ರೆಂಡ್ಸ್ ಕ್ಲಬ್ ಸದಸ್ಯರು ಹಾಗೂ ಆಶ್ರಮ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಭಾಗವಹಿಸಿದರು.