ದುಗ್ಗಲಡ್ಕದಲ್ಲಿ ಮಿತ್ರ ಯುವಕ ಮಂಡಲ ಮತ್ತು ಕುರಲ್ ತುಳುಕೂಟದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

0


ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ದುಗ್ಗಲಡ್ಕದ ಮಿತ್ರ ಯುವಕ ಮಂಡಲದ ಕಟ್ಟಡದ ಆವರಣದಲ್ಲಿ ನಡೆಸಲಾಯಿತು.


ಧ್ವಜಾರೋಹಣವನ್ನು ವಕೀಲರಾದ ಸುರೇಶ್ ನಾಯಕ್ ನೆರವೇರಿಸಿದರು. ಶಿಕ್ಷಕ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಗೌಡ ಮೋಂಟಡ್ಕ ಹಾಗೂ ದುಗ್ಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುರಲ್ ತುಳುಕೂಟದ ಗೌರವಾಧ್ಯಕ್ಷ ನಾರಾಯಣ ಟೈಲರ್, ಯುವಕ ಮಂಡಲದ ಗೌರವಾಧ್ಯಕ್ಷ ದಿನೇಶ್ ಕೊಯಿಕುಳಿ, ಅಧ್ಯಕ್ಷ ಚೇತನ್ ಕಲ್ಮಡ್ಕ, ಕಾರ್ಯದರ್ಶಿ ಪ್ರದೀಪ್ ಕೊಯಿಕುಳಿ, ಕೋಶಾಧಿಕಾರಿ ಚಿದಾನಂದ ಕೊಯಿಕುಳಿ, ಕುರಲ್ ತುಳುಕೂಟದ ಕಾರ್ಯದರ್ಶಿ ಮನೋಜ್ ಪಾನತ್ತಿಲ, ಕೋಶಾಧಿಕಾರಿ ಶೇಖರ್ ಕುದ್ಪಾಜೆ, ಮಾಜಿ ನ.ಪಂ.ಸದಸ್ಯರರಾದ ಇಬ್ರಾಹಿಂ ನೀರಬಿದಿರೆ, ಜಯಶೀಲ ದುಗ್ಗಲಡ್ಕ, ಯುವಕ ಮಂಡಲದ ಪೂರ್ವಾಧ್ಯಕ್ಷರುಗಳಾದ ಕೆ.ಎನ್.ಜಯರಾಮ ಶೆಟ್ಟಿ, ಕೆ.ಟಿ.ಬಾಗೀಶ್, ಧನಂಜಯ ಕಲ್ಮಡ್ಕ, ಹಿರಿಯ ಪದಾಧಿಕಾರಿಗಳಾದ ಕೃಷ್ಣ ಸ್ವಾಮಿ ಕಂದಡ್ಕ, ವಾರಿಜ ಕೊರಗಪ್ಪ ಗೌಡ ಕೊಯಿಕುಳಿ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಆಮಂತ್ರಣ ಬಿಡುಗಡೆ
ಈ ಸಂದರ್ಭದಲ್ಲಿ ಜಂಟಿ ಸಂಸ್ಥೆಗಳ ಆಶ್ರಯದಲ್ಲಿ ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯಲ್ಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತದ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಮಂತ್ರಣವನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕುರಲ್ ತುಳುಕೂಟದ ಅಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ ಸ್ವಾಗತಿಸಿ, ಯುವಕ ಮಂಡಲದ ಪೂರ್ವಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.