ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ದುಗ್ಗಲಡ್ಕದ ಸರ್ಕಾರಿ ಪ್ರೌಢಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು .


ಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಪಿ. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಕ ವೆಂಕಟ್ರಮಣ ಮಾರ್ಗ ದರ್ಶನದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಕವಾಯತು ನಡೆಸಿಕೊಟ್ಟರು. ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಅಧ್ಯಕ್ಷತೆಯನ್ನು ವಹಿಸಿದ್ದರು. ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಟಿ. ವಿಶ್ವನಾಥರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಸಮಾಜ ವಿಜ್ಞಾನ ಶಿಕ್ಷಕಿ ಶೋಭಾ ಎ. ಎನ್. ಸ್ವಾತಂತ್ರ್ಯೋತ್ಸವದ ಭಾಷಣ ಮಾಡಿದರು.ವಿದ್ಯಾರ್ಥಿಗಳು ಭಾಷಣ, ದೇಶ ಭಕ್ತಿಗೀತೆಗಳನ್ನು ನಡೆಸಿ ಕೊಟ್ಟರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯ ನಾರಾಯಣ ಟೈಲರ್ ,ಅಂಗನವಾಡಿ ಶಿಕ್ಷಕಿ ಚಿತ್ರಾವತಿ ಉಪಸ್ಥಿತರಿದ್ದರು. ಸಹಶಿಕ್ಷಕರಾದ ಉಣ್ಣಿಕೃಷ್ಣ ಸಿ.ಕಾರ್ಯಕ್ರಮ ನಿರ್ವಹಿಸಿದರು. ಉದಯ್ ಕುಮಾರ್ ವೈ.ಕೆ.ವಂದಿಸಿದರು. ಗೀತಾ ಪಿ. , ಅಶ್ವಿನಿ ಕುಮಾರಿ, ಪ್ರ.ದ.ಸ. ವಸಂತ್ ಕುಮಾರ್ ಪಿ, ಅಡುಗೆ ಸಿಬ್ಬಂದಿಗಳು ಸಹಕರಿಸಿದರು. ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಂಗನವಾಡಿ ಮಕ್ಕಳು, ಸಿಬ್ಬಂದಿ ಭಾಗವಹಿಸಿದ್ದರು.