ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವ ಆಚರಣೆ

0

ಸುಳ್ಯ ಸೀಮೆ ತೊಡಿಕಾನ
ಶ್ರೀಮಲ್ಲಿಕಾರ್ಜುನ ದೇವಸ್ಥಾನದಲ್ಲಿ 77ನೇಸ್ವಾತಂತ್ರೋತ್ಸವ
ಆಚರಿಸಲಾಯಿತು. ಧ್ವಜಾರೋಹಣವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ
ಯು.ಯಂ.ಕಿಶೋರ್ ಕುಮಾರ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಅರಂತೋಡು ನೆಹರೂ ಸ್ಮಾರಕ
ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿಯ ಉಪನ್ಯಾಸಕರಾದ ಪದ್ಮಕುಮಾರ್ ಗುಂಡಡ್ಕ
ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಪನಾ ಸಮಿತಿ ಸದಸ್ಯರು, ಅರ್ಚಕರು ಹಾಗೂ
ಸಿಬ್ಬಂದಿವರ್ಗ, ಅರಂತೋಡು ತೊಡಿಕಾನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರು ಮತ್ತು
ನಿರ್ದೇಶಕರು, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರು,ಗ್ರಾಮ ಪಂಚಾಯತ್ ಉಪಾಧ್ಯಕ್ಷರು
ಮತ್ತು ಸದಸ್ಯರುಗಳು, ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು,
ದೇವಳದ ಜೀರ್ಣೋದ್ಧಾರ ಸಮಿತಿಯ ಸದಸ್ಯರು, ತೊಡಿಕಾನ ಶಾಲೆಯ ಎಸ್.ಡಿ.ಯಂ.ಸಿ ಅಧ್ಯಕ್ಷರು
ಮತ್ತು ಸದಸ್ಯರು, ಶಾಲಾ ವಿದ್ಯಾರ್ಥಿಗಳು, ತೊಡಿಕಾನ ಮಲ್ಲಿಕಾರ್ಜುನ ಭಜನಾ ಸಂಘದ ಅಧ್ಯಕ್ಷರು ಮತ್ತು
ಸದಸ್ಯರುಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಣೆಯನ್ನು ದೇವಳದ
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಉಮಾಶಂಕರ್‌ ಅಡ್ಯಡ್ಕ ನೆರವೇರಿಸಿದರು.