ಡಾlರವಿ ಕಕ್ಕೆ ಪದವು ಅವರಿಗೆ ಕಡಬ ಆಡಳಿತ ಸೌಧದಲ್ಲಿ ಸನ್ಮಾನ

0

ಸುಬ್ರಹ್ಮಣ್ಯದ ಸಮಾಜ ಸೇವಕ ಆರ್ಯಭಟ ಪ್ರಶಸ್ತಿ ಪುರಸ್ಕೃತ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷ ರವಿ ಕಕ್ಕೆ ಪದವು ಅವರಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ವಿಶೇಷ ಸಾಧನೆಗಾಗಿ ಕಡಬ ತಾಲೂಕು ವತಿಯಿಂದ ಗುರುತಿಸಿ ಇಂದು ಕಡಬ ಆಡಳಿತ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.

ಸನ್ಮಾನ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ತಹಶೀಲ್ದಾರ್ ಲೋಕೇಶ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಪಕೀರ ಮೂಲ್ಯ, ಕಡಬ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜನಾರ್ಧನ ಗೌಡ , ಹೈಸ್ಕೂಲ್ ವಿಭಾಗದ ಉಪ ಪ್ರಾಂಶುಪಾಲೆ ವೇದಾವತಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಓಬಳೇಶ್ವರ, ಕಡಬ ತಾಲೂಕು ಉಪ ತಹಶೀಲ್ದಾರ್ ಗೋಪಾಲ ಕಲ್ಲುಗುಡ್ಡೆ, ಕಡಬ ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಮುಂತಾದವರು ಉಪಸ್ಥಿತರಿದ್ದರು.