ನಾಗಪಟ್ಟಣ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಾಗಪಟ್ಟಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ಸಯನ ಉಲ್ಲಾಸ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ದಿನೇಶ್ ಕೋಲ್ಚಾರ್, ಭಾರತಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು, ಅಂಬೇಡ್ಕರ್ ರಕ್ಷಣಾ ವೇದಿಕೆಯ ಸದಸ್ಯರು, ಶಾಲೆ ಹಾಗೂ ಅಂಗನವಾಡಿ ಶಿಕ್ಷಕರು, ವಿದ್ಯಾರ್ಥಿಗಳು, SDMC ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಸ್ಥಳೀಯ ಸಂಘದ ಸದಸ್ಯರುಗಳು, ಆಲೆಟ್ಟಿ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಮಲ ನಾಗಪಟ್ಟಣ, ಸದಸ್ಯರಾದ ಶ್ರೀಮತಿ ಮೀನಾಕ್ಷಿ ಹಾಗೂ ಸ್ಥಳೀಯರು ಭಾಗವಹಿಸಿದರು.

ಸ್ವಾತಂತ್ರ್ಯ ಹೋರಾಟಗಾರರ ಘೋಷಣೆಯನ್ನು ಕೂಗುತ್ತಾ ಮೆರವಣಿಗೆ ಮಾಡಲಾಯಿತು. ಸ್ಪರ್ಧೆಯಲ್ಲಿ ವಿಜೇತ ರಾದವರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.