ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಕ್ರಷ್ಣ ಜನ್ಮಾಷ್ಟಮಿ ಆಚರಣೆಯ ಪೂರ್ವಭಾವಿ ಸಭೆ

0

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಕ್ರಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ನಡೆದ ಸಭೆಯಲ್ಲಿ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದೆಂದು ತೀರ್ಮಾನಿಸಲಾಯಿತು.

ಮಕ್ಕಳಿಗೆ ಮತ್ತು ಯುವಕರಿಗೆ ಮೊಸರು ಕುಡಿಕೆ, ಅಂಗನವಾಡಿ ಮಕ್ಕಳಿಗೆ ಶ್ರೀ ಕೃಷ್ಣನ ವೇಷ,1ರಿಂದ3,4ರಿಂದ7,8ರಿಂದ10 ವರೆಗಿನ ಶಾಲಾ ಮಕ್ಕಳಿಗೆ ಶ್ರೀ ಕೃಷ್ಣನ ಚಿತ್ರ ಬಿಡಿಸುವ ಸ್ಪರ್ದೆ ಹಾಗೂ ವಿವಿಧ ಸ್ಪರ್ಧೆಗಳು ಹಾಗೂ ಪುರುಷರಿಗೆ, ಮಹಿಳೆಯರಿಗೆ ಹಗ್ಗಜಗ್ಗಾಟ ಹಾಗೂ ಬೇರೆ ಬೇರೆ ರೀತಿಯ ಸ್ಪರ್ಧೆಗಳನ್ನು ನಡೆಸಲಾಗುವುದೆಂದು ತೀರ್ಮಾನಿಸಲಾಯಿತು.ಊರ ಭಕ್ತಾದಿಗಳಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 6 ರಿಂದ ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆಯಲಿದೆ.

ಸಭೆಯಲ್ಲಿ ಗೌರವಾಧ್ಯಕ್ಷರಾದ ಶ್ರೀ ರುಕ್ಮಯ್ಯ ಗೌಡ, ಅಧ್ಯಕ್ಷ ಗಿರಿಧರ ಗೌಡ ನಾಯರ್ ಹಿತ್ಲು, ಕಾರ್ಯದರ್ಶಿ ನಿರಂಜನ, ಜೊತೆ ಕಾರ್ಯದರ್ಶಿ ಉದಯಕುಮಾರ್ ಆರ್ತಾಜೆ, ಉಪಾಧ್ಯಕ್ಷೆ ಹರಿಣಾಕ್ಷಿ, ಖಜಾಂಚಿ ಲೀಲಾವತಿ, ಗೋಪಾಲಕೃಷ್ಣ ಸುತ್ತುಕೋಟೆ, ಲೋಕೇಶ ಸುತ್ತುಕೋಟೆ, ಸಲಹೆಗಾರರಾದ ಸಾಂತಪ್ಪ ಗೌಡ ಮೋಂಟಡ್ಕ,ಸುಂದರ ರೈ ಕುಕ್ಕಾಜೆಕ್ಕಾನ, ಪ್ರಶಾಂತ ಮಿತ್ತಮಜಲು ಹಾಗೂ ಊರ ಹಿರಿಯರು ಉಪಸ್ಥಿತರಿದ್ದು ಆಯೋಜಿಸಲಾಗಿದೆ ಎಂದು ಸಮಿತಿಯ ಸಂಚಾಲಕ ಸತ್ಯ ಶಾಂತಿ ತ್ಯಾಗ ಮೂರ್ತಿ ಕುಕ್ಕಂದೂರು ಪತ್ರಿಕಾ ವರದಿ ನೀಡಿರುತ್ತಾರೆ.