ಐವರ್ನಾಡು ಸಹಕಾರಿ ಸಂಘಕ್ಕೆ ಶೇ. 100 ಸಾಲ ವಸೂಲಾತಿಗಾಗಿ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

0

2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘದ ಹೊರಬಾಕಿ ಸಾಲದ ವಸೂಲಾತಿ ಪೈಕಿ ಶೇ 100 ಸಾಧನೆಗೈದ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ.

ಆ. 19ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರು ಈ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಎಸ್.ಎನ್ ಮನ್ಮಥ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ ಯವರಿಗೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ವಾಸುದೇವ ಬೊಳುಬೈಲು,ಮಹೇಶ್ ಜಬಳೆ, ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಉಪಸ್ಥಿತರಿದ್ದರು.