ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮುರುಳ್ಯ ಹಾಲು ಸೊಸೈಟಿಗೆ ಸಾಧನಾ ಪ್ರಶಸ್ತಿ

0

ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದ.ಕ‌.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಉತ್ತಮ ನಿರ್ವಹಣೆಗೆ ಸಾಧನಾ ಪ್ರಶಸ್ತಿ ಲಭಿಸಿದೆ.
ಆ.19ರಂದು ಮಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಧ್ಯಕ್ಷ ಅಶೋಕ್ ಕುಮಾರ್ ರೈ ಊರುಸಾಗು, ಕಾರ್ಯದರ್ಶಿ ಅಕ್ಷತಾ ಎ. ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸೀತಾರಾಮ ಗೌಡ ಎಂ. ಬಿ., ನಿರ್ದೇಶಕರಾದ ಶ್ರೀಮತಿ ಚಂದ್ರಪ್ರಭ ಮುರುಳ್ಯ, ಭುವನೇಶ್ವರ ಪೂದೆ ಉಪಸ್ಥಿತರಿದ್ದರು.