ಪೈಂದೋಡಿ ದೇವಳದಲ್ಲಿ ಸಾಮೂಹಿಕ ನಾಗ ತಂಬಿಲ ಸೇವೆ

0

ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಆ.21 ರಂದು ಸಾಮೂಹಿಕ ನಾಗ ತಂಬಿಲ ಸೇವೆ ನಡೆಯಿತು.ಮಹಾಪೂಜೆ ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ದೇವಳದ ಪ್ರಧಾನ ಅರ್ಚಕ ವಿಷ್ಣು ಪೈಂದೋಡಿ ರವರ ನೇತೃತ್ವದಲ್ಲಿ ವೈಧಿಕ ಕಾರ್ಯಕ್ರಮಗಳು ನಡೆಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭವಾನಿ ಶಂಕರ ಪಾಲೋಳಿ, ಸದಸ್ಯರು ಅಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಬರೆಮೇಲು, ಸದಸ್ಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.