ನಾಗಪಟ್ಟಣ ಸದಾಶಿವ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಆಚರಣೆ

0

ನಾಗಪಟ್ಟಣ
ಶ್ರೀ ಸದಾಶಿವ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ತಂಬಿಲ ಸೇವೆ ಮತ್ತು ‌ವಿಶೇಷ ಅಭಿಷೇಕ ಪೂಜೆಯು ಇಂದು ಬೆಳಗ್ಗೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕೆದಿಲಾಯರು ನಾಗದೇವರಿಗೆ ತಂಬಿಲ ಸೇವೆ ಹಾಗೂ ಕ್ಷೀರಾಭಿಷೇಕ, ಸೀಯಾಳಭಿಷೇಕವನ್ನು ಅರ್ಪಿಸಿ ಮಹಾ ಮಂಗಳಾರತಿಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ಮತ್ತು ಸದಸ್ಯರು, ಸೇವಾ ಸಮಿತಿ, ಭಜನಾ ಸಂಘದ ಸದಸ್ಯರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸ್ಥಳೀಯ ಭಕ್ತಾದಿಗಳು ಆಗಮಿಸಿ ನಾಗನಿಗೆ ಹಾಲು ಮತ್ತು ಸೀಯಾಳವನ್ನು ಸಮರ್ಪಿಸಿದರು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.