ಸುಬ್ರಹ್ಮಣ್ಯದಲ್ಲಿ ಉಚಿತ ಫೂಟ್ ಪಲ್ಸ್ ತೆರಪಿ ಶಿಬಿರ ಉದ್ಘಾಟನೆ

0

ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇದರ ನೇತೃತ್ವದಲ್ಲಿ ಆ.23 ರಂದು ಬೆಳಿಗ್ಗೆ ಪಂಚಾಯತ್ ಸಭಾಂಗಣದಲ್ಲಿ ಉಚಿತ ಫುಡ್ ಪಲ್ಸ್ ತೆರಪಿ ಶಿಬಿರ ಉದ್ಘಾಟನೆಗೊಂಡಿತು.

ಶಿಬಿರದ ಉದ್ಘಾಟನೆಯನ್ನು ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಎಸ್ ಎನ್ ಉಡುಪ ಅವರು ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆಪದವು ಅವರು ವಹಿಸಿದ್ದರು.

ಪುತ್ತೂರಿನ ನೆಮ್ಮದಿ ವೆಲ್ನೆಸ್ ಸೆಂಟರ್ನ ಮಾಲಕರಾದ ಪ್ರಭಾಕರ ಸಾಲ್ಯಾನ್ ಅವರು ಉಚಿತ ಪಾದ ಪಲ್ಸ್ ತೆರಪಿಯ ಬಗ್ಗೆ ಮಾಹಿತಿಗಳನ್ನು ನೀಡಿದರು. ವೇದಿಕೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ, ರೋಟರಿ ಕ್ಲಬ್ ಅಧ್ಯಕ್ಷರು ಪ್ರಶಾಂತ್ ಕೋಡಿಬೈಲ್, ಕುಕ್ಕೆ ಶ್ರೀ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ವಿವೇಕ ದೇವರಗದ್ದೆ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ದಿನೇಶ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಲೀಜನ್ ಅಧ್ಯಕ್ಷ . ವಿಶ್ವನಾಥ ನಡುತೋಟ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಸದಸ್ಯ ಭಾರತಿ ದಿನೇಶ್ ವಂದಿಸಿದರು.