ಆ.25 : ಸುಳ್ಯ ಲಯನ್ಸ್ ಕ್ಲಬ್‌ನಲ್ಲಿ ವಿಪತ್ತು ನಿರ್ವಹಣೆಯ ಬಗ್ಗೆ ಒಂದು ದಿನದ ಕಾರ್ಯಾಗಾರ

0

ಸುಳ್ಯ ಲಯನ್ಸ್ ಕ್ಲಬ್, ಕರ್ನಾಟಕ ರಾಜ್ಯ ವೈಜಾನಿಕ ಸಂಶೋಧನಾ ಪರಿಷತ್ತು ಇದರ ಆಶ್ರಯದಲ್ಲಿ ದ.ಕ. ಜಿಲ್ಲೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಂಗಳೂರು ಇದರ ವತಿಯಿಂದ ವಿಪತ್ತು ನಿರ್ವಹಣೆಯ ಬಗ್ಗೆ ಒಂದು ದಿನದ ಕಾರ್ಯಾಗಾರ ಆ.25 ರಂದು ಬೆಳಿಗ್ಗೆ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ.


ಕಾರ್ಯಾಗಾರದಲ್ಲಿ ತಾಲೂಕಿನ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸುಳ್ಯ ತಾಲೂಕು ಅಟೋ ಚಾಲಕರ ಸಂಘ, ಸುಳ್ಯ ಎಸ್.ಕೆ.ಎಸ್.ಎಸ್.ಎಫ್, ಸುಳ್ಯ ಕಾರುಣ್ಯ ಚಾರಿಟೇಬಲ್ ಟ್ರಸ್ಟ್, ಪೈಚಾರ್ ಅಂಬುಲೆನ್ಸ್ ಚಾಲಕರು, ಸುಳ್ಯ ಎಸ್.ಎಸ್.ಎಫ್ ನ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.