ಜಯನಗರ :ಚಂದ್ರಯಾನ-3 ಯಶಸ್ವಿಗೆ ಮದರಸಾ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಿ ಸಂಭ್ರಮ

0

ಚಂದ್ರಯಾನ 3 ಯಶಸ್ವಿ ಹಿನ್ನೆಲೆಯಲ್ಲಿ ಜಯನಗರ ಜನ್ನತುಲ್ ಉಲೂಮ್ ಮದರಸಾ ವಿದ್ಯಾರ್ಥಿಗಳಿಗೆ ಆಗಸ್ಟ್ 24ರಂದು ಸ್ಥಳೀಯ ಆಡಳಿತ ಕಮಿಟಿ ವತಿಯಿಂದ ಸಿಹಿ ತಿಂಡಿ ವಿತರಿಸಿ ಸಂಭ್ರಮ ಆಚರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಮಾತನಾಡಿ ಚಂದ್ರಯಾನ 3 ರ ಯಶಸ್ವಿ ವಿಶ್ವದಲ್ಲಿಯೇ ಭಾರತದ ಗೌರವವನ್ನು ಹೆಚ್ಚಿಸಿದೆ.

ನಮ್ಮ ದೇಶದ ಹೆಮ್ಮೆಯ ವಿಜ್ಞಾನಿಗಳ ಪರಿಶ್ರಮ ಸಾರ್ಥಕವಾಗಿದ್ದು ಇದು ದೇಶವೇ ಸಂಭ್ರಮಿಸುವ ದಿನವಾಗಿದೆ ಎಂದು ಹೇಳಿದರು.
ಸ್ಥಳೀಯ ಮದರಸ ಸದರ್ ಮುಅಲ್ಲಿಮ್ ಪ್ರಾರ್ಥನೆ ನೆರವೇರಿಸಿದರು.

ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಮುಟ್ಟತೋಡಿ, ಕೋಶಾಧಿಕಾರಿ ಹಾಜಿ ಅಬ್ದುಲ್ಲಾ ಜಯನಗರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ಸಂತೋಷ ಹಂಚಿಕೊಳ್ಳಲಾಯಿತು.