ಸಂಪಾಜೆ ಗ್ರಾಮದ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ

0

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಮಾನ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ. ಎ. ಬಾವ ಮುಖಂತರ ಮಾನ್ಯ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲ್ಯೆ ಮಹಿಲನ್ ರವರನ್ನು ಭೇಟಿಯಾಗಿ ಸಂಪಾಜೆ ಗ್ರಾಮದಲ್ಲಿ ಘನ ತಾಜ್ಯ ಘಟಕಕ್ಕೆ ಸ್ಥಳ, ಸ್ಮಶಾನಕ್ಕೆ ಸರಕಾರದಿಂದ ಮಂಜೂರು ಆಗಿರುವ ಸ್ಥಳಕ್ಕೆ ತಡೆಬೇಲಿ ನಿರ್ಮಾಣ, ಶವ ಸಂಸ್ಕಾರ ಮಾಡಲು ವ್ಯವಸ್ಥೆ ಮಾಡುವವರ ಅಗತ್ಯ ಕಟ್ಟಡ ಮತ್ತು ಸ್ಥಳ , ಪ್ಲಾಟಿಂಗ್ ಸಮಸ್ಯೆ ಕಳೆದ ಹಲವು ವರ್ಷಗಳಿಂದ ನಿರಂತರ ಗ್ರಾಮ ಪಂಚಾಯತ್ ಮೂಲಕ ಅರ್ಜಿ ಸಲ್ಲಿಸುತ್ತಿದ್ದು.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಾಳಾದ ರಸ್ತೆಗಳಿಗೆ ಅನುದಾನ, ರಾಷ್ಟ್ರೀಯ ಹೆದ್ದಾರಿ ಬಳಿ ಹಾದು ಹೋಗುವ ನದಿಗೆ ಕೃಷಿ ಭೂಮಿಗೆ ತಡೆಗೋಡೆ ನಿರ್ಮಾಣ, ಗ್ರಾಮ ಪಂಚಾಯತ್ ನ ವಿವಿಧ ಉದ್ದೇಶಕ್ಕೆ 10 ಎಕ್ರೆ ಸ್ಥಳ, ಸಂಪಾಜೆ ಗ್ರಾಮಕರಣಿಕರ ಕಚೇರಿಗೆ ಗ್ರಾಮ ಆಡಳಿತ ಅದಿಕಾರಿ ನೇಮಕ, ಸಂಪಾಜೆ ಗ್ರಾಮ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುದಕ್ಕೆ ಪರಿಹಾರ,

ಕಲ್ಲುಗುಂಡಿ ಪೇಟೆಯಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರಿಗೆ ತೊಂದರೆ, ಪಾರ್ಕಿಂಗ್ ಸಮಸ್ಯೆ, ಮಾರುಕಟ್ಟೆ ಸಮಸ್ಯೆ ಮತ್ತು ಹಲವು ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಯವರ ಗಮನಕ್ಕೆ ತರಲಾಯಿತು.

ನಿಯೋಗದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಸಂಪಾಜೆ, ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ, ಸದಸ್ಯರಾದ ವಿಮಲಾ ಪ್ರಸಾದ್, ಅನುಪಮಾ. ಉಪಸ್ಥಿತರಿದ್ದರು. ಸಂಪಾಜೆ ಗ್ರಾಮದ ಸಮಸ್ಯೆಗೆ ಪರಿಹಾರ ನೀಡುವ ಭರವಸೆ ನೀಡಿ ಜನ ಸಂಪರ್ಕ ಸಭೆ ನಡೆಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.