p>

ಉಪ್ಪಿನಂಗಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಶೇಖರ್ ನೇಮಕ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಯು.ಡಿ. ಶೇಖರ್ ರವರು ಅಕಾಲಿಕವಾಗಿ ಸರಕಾರಿ ಸೇವೆಯಲ್ಲಿ ಇರುವಾಗಲೇ ಮರಣ ಹೊಂದಿದ್ದು. ಅನುಕಂಪದ ಆಧಾರದ ಮೇಲೆ ಅವರ ಪತ್ನಿ ಶ್ರೀಮತಿ ಗೀತಾ ಶೇಖರ್ ರವರಿಗೆ ಸರಕಾರಿ ಹುದ್ದೆ ದೊರೆತಿದ್ದು,ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮ ಪಂಚಾಯತ್ ಗ್ರೇಡ್‌ 1 ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಸರಕಾರದ ಸುತ್ತೋಲೆ ಮತ್ತು ನೇಮಕಾತಿ ಪ್ರಾಧಿಕಾರಿ ಮತ್ತು ಉಪ ಕಾರ್ಯದರ್ಶಿಗಳು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇವರ ಆದೇಶದ ಪ್ರಕಾರ ಯು. ಡಿ .ಶೇಖರ್ ರವರ ಪತ್ನಿಯಾದ

ಶ್ರೀಮತಿ ಗೀತಾ ಶೇಖರ್ ಅವರಿಗೆ ಅನುಕಂಪದ ಆಧಾರದ ಮೇರೆಗೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ ವನ್ ಹುದ್ದೆಗೆ ನೇಮಕಾತಿ ಆದೇಶ ಹೊರಡಿಸಿದ್ದು ಶ್ರೀಮತಿ ಗೀತಾ ಶೇಖರ್ ಅವರು ಆ.24 ರಂದು ಪುತ್ತೂರು ತಾಲೂಕು ಪಂಚಾಯತ್ ನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಕಡಬರವರಿಗೆ ಆದೇಶ ಪ್ರತಿಯೊಂದಿಗೆ ಹಾಜರಾಗಿ ಸರಕಾರಿ ಸೇವೆಯ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.