ಏನೆಕಲ್ಲು ಸರಕಾರಿ ಪ್ರೌಢ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಏನೆಕಲ್ಲು ಸರಕಾರಿ ಪ್ರೌಢ ಶಾಲೆಯಲ್ಲಿ ಆ.24 ರಂದು ನಡೆಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ತುಕಾರಾಮ್ ಏನೆಕಲ್ಲು ಬಹುಮಾನ ವಿತರಿಸಿದರು. ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಹರೀಶ್ ಬಂಟ್ವಾಳ್ ಲಂಚ ಭ್ರಷ್ಟಾಚಾರ ವಿರುದ್ದದ ಮತದಾನ ಜಾಗೃತಿ ಪ್ರತಿಜ್ಞೆ ಭೋದಿಸಿದರು.ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ಸುದ್ದಿ ಪತ್ರಿಕೆಯ ವರದಿಗಾರ ಈಶ್ವರ್ ವಾರಣಾಸಿ, ಕುಶಾಂತ್ ಕೊರತ್ಯಡ್ಕ ಹಾಗೂ ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

ಶಿಕ್ಷಕಿ ದೀಪಾ ಕಠಾರೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.