p>

ಕೇರ್ಪಡ : ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

0

ಶಾಸಕಿ ಭಾಗಿರಥಿ ಮುರುಳ್ಯರಿಗೆ ಸನ್ಮಾನ

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ಮಹಿಷಮರ್ದಿನಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ, ಸೇವಾ ಸಮಿತಿ, ಮಹಿಳಾ ಸೇವಾ ಸಮಿತಿ ವತಿಯಿಂದ ಆಗಸ್ಟ್ 25ರಂದು ದೇವಳದ ಸಭಾಂಗಣದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಯಿತು.
ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜರಾಯರು ಮತ್ತು ರಾಘವೇಂದ್ರ ಬೈಪಡಿತ್ತಾಯ, ಪ್ರಶಾಂತ್ ಪರ್ಲತ್ತಾಯರು ಪೂಜಾ ನೇತೃತ್ವ ವಹಿಸಿದ್ದರು.
.


ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲುರವರು ಅಧ್ಯಕ್ಷತೆ ವಹಿಸಿದ್ದರು. ಸಂಧ್ಯಾ ಕಾನತ್ತೂರು ರವರು ಧಾರ್ಮಿಕ ಪ್ರವಚನ ನೀಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯೆ, ಸೇವಾ ಸಮಿತಿ ಕಾರ್ಯದರ್ಶಿ, ಉತ್ಸವ ಸಮಿತಿ ಸಂಚಾಲಕಿಯಾಗಿದ್ದ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮರುಳ್ಯರವರನ್ನು ಗುರುತಿಸಿ ಗೌರವಿಸಿ ಶಾಲು ಹೊಂದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು