ಉಬರಡ್ಕ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು
ಉಬರಡ್ಕ ಸ.ಹಿ.ಪ್ರಾ ಶಾಲೆಯಲ್ಲಿ ಆ.25 ರಂದು ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಾವತಿ ಬಹುಮಾನ ವಿತರಿಸಿದರು.

ಸುದ್ದಿ ಕಚೇರಿ
ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ಸುದ್ದಿ ಪತ್ರಿಕೆಯ ವರದಿಗಾರ ಕುಶಾಂತ್ ಕೊರತ್ಯಡ್ಕ ಹಾಗೂ ಶಾಲಾ ಶಿಕ್ಷಕರಾದ ಶ್ರೀಮತಿ ಧನಲಕ್ಷ್ಮಿ, ಶ್ರೀಮತಿ ಚೈತ್ರ, ಮಾಲತಿ, ಚಂದ್ರಶೇಖರ ಉಪಸ್ಥಿತರಿದ್ದರು.