ಪೂದೆ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ, ಧಾರ್ಮಿಕ ಕಾರ್ಯಕ್ರಮ

0

ಪೂದೆ ಶ್ರೀ ಗಣಪತಿ ಮಲ್ಲಿಕಾರ್ಜುನ ಸ್ವಾಮಿ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಆಗಸ್ಟ್ 25ರಂದು ಸಾರ್ವಜನಿಕ ವರಮಹಾಲಕ್ಷ್ಮಿ ವ್ರುತಪೂಜೆಯು ಕ್ಷೇತ್ರದ ಅರ್ಚಕ ಸುಬ್ರಮಣ್ಯ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು.


ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಶ್ರೀಮತಿ ಗೀತಾ ಕುಶಾಲಪ್ಪ ರವರು ಅಧ್ಯಕ್ಷತೆ ವಹಿಸಿದ್ದರು. ಚೊಕ್ಕಾಡಿಯ ಆಧ್ಯಾತ್ಮಿಕ ಚಿಂತಕ ಬಾಳಿಲ ತ್ರಿವೇಣಿ ವಿಶ್ವೇಶ್ವರ ರವರು ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಮಹತ್ವದ ಮಾಹಿತಿ ನೀಡಿ ಭಗವದ್ಗೀತಾ ಪಾರಾಯಣ ನಡೆಸಿಕೊಟ್ಟರು.
ಶಾಸಕಿ ಭಾಗಿರಥಿ ಮುರುಳ್ಯ ಹಾಗೂ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರನ್ನು ಗೌರವಿಸಲಾಯಿತು.

ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ದೇವಳದ ಅಧ್ಯಕ್ಷರುಗಳಾದ ಭುವನೇಶ್ವರ ಪೂದೆ, ಪದ್ಮನಾಭ ಪೂದೆ, ಭಜನಾ ಮಂಡಳಿಯ ಅಧ್ಯಕ್ಷ ಕೃಷ್ಣಪ್ಪಗೌಡ ಪೂದೆ ಉಪಸ್ಥಿತರಿದ್ದರು.


ಶ್ರೀಮತಿ ಚಂದ್ರಕಲಾ ಸ್ವಾಗತಿಸಿ, ಶ್ರೀಮತಿ ನೇತ್ರಾವತಿ ಗೋಲ್ತಿಲ ವಂದಿಸಿದರು. ಶ್ರೀಮತಿ ಕುಸುಮಾವತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಕಿಶೋರಿ ಕೃಷ್ಣಪ್ಪ ಪ್ರಾರ್ಥಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.