ಸೆ.1 ರಂದು ಸುಳ್ಯ ರಾಘವೇಂದ್ರ ಮಠದಲ್ಲಿ 352 ನೇ ವರ್ಷದ ರಾಯರ ಆರಾಧನಾ ಮಹೋತ್ಸವ

0

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ರಾಯರ 352 ನೇ ವರ್ಷದ ಆರಾಧನಾ ಮಹೋತ್ಸವವು ಸೆ.1 ರಂದು ನಡೆಯಲಿದ್ದು ಇದರ ಪೂರ್ವ ಭಾವಿಯಾಗಿ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯು ಆ.26 ರಂದು ನಡೆಯಿತು.

ಪತ್ರಿಕಾ ಗೋಷ್ಠಿಯಲ್ಲಿ ಬೃಂದಾವನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಯವರು ಮಾತನಾಡಿ
“ಬೆಳಗ್ಗೆ ಗರ್ಭಗುಡಿಯ ಬಾಗಿಲಿಗೆ ಹಿತ್ತಾಳೆ ಕವಚ ಸಮರ್ಪಣೆಯಾಗಲಿರುವುದು.


ವೈದಿಕ ಕಾರ್ಯಕ್ರಮದ ಅಂಗವಾಗಿ ಗಣಪತಿ ಹವನ ,ಪವಮಾನ ಹೋಮ, ಪವಮಾನ ಅಭಿಷೇಕ, ಬ್ರಾಹ್ಮಣಾರಾಧನೆಯಾಗಿ ಮಹಾಪೂಜೆ ನಡೆದು ಮಂತ್ರಾಕ್ಷತೆ ಯೊಂದಿಗೆ ಪ್ರಸಾದ ವಿತರಣೆ ಯಾಗಲಿರುವುದು.
ಬೆಳಗ್ಗೆ 11.00 ರಿಂದ ರಾಜೇಶ್ ಮೇನಾಲ ಇವರಿಂದ “ಮಾರುತಿ ಮಹಿಮೆ” ಎಂಬ ಹರಿಕಥಾ ಕಾಲಕ್ಷೇಪ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆಯಾಗಲಿದೆ.


ಸಂಜೆ ಸಮಯದಲ್ಲಿ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ವಿಶೇಷವಾಗಿ
ಪಲ್ಲಕ್ಕಿ ಸೇವೆ,ತೊಟ್ಟಿಲು ಸೇವೆ,ಅಷ್ಟಾವಧಾನ ಸೇವೆಯು ವಿಜೃಂಭಣೆಯಿಂದ ನಡೆಯಲಿರುವುದು.
ರಾತ್ರಿ ಮಹಾಪೂಜೆಯಾಗಿ ನಡೆದು ಪ್ರಸಾದ ವಿತರಣೆ ಯಾಗಲಿರುವುದು. ಆರಾಧನಾ ಮಹೋತ್ಸವ ದ ಪ್ರಯುಕ್ತ ರಾತ್ರಿ ಅನ್ನ ಸಂತರ್ಪಣೆಯು ನಡೆಯಲಿರುವುದು ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಳ್ಳಿ ಸಂಪನ್ನದ ಮಾಜಿ ಅಧ್ಯಕ್ಷ ಗಂಗಾಧರ ಮಟ್ಟಿ, ಅಧ್ಯಕ್ಷ ರಾಮ್ ಕುಮಾರ್ ಹೆಬ್ಬಾರ್,
ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ ಉಪಸ್ಥಿತರಿದ್ದರು.