ಉಬರಡ್ಕ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಬಿಡುಗಡೆ

0

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯ, ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.19 ರಿಂದ ಸೆ.20 ರವರೆಗೆ ನಡೆಯುವ 13 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.25 ರಂದು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶ್ಯಾಮ್ ಪಾನತ್ತಿಲ, ದೇವಾಲಯದ ಆಡಳಿತ ಮೊಕ್ತೇಸರ ರತ್ನಾಕರ ಗೌಡ ಬಳ್ಳಡ್ಕ, ದೇವತಾರಾಧನ ಸಮಿತಿ ಅಧ್ಯಕ್ಷ ಕೆ.ಶಶಿಧರ ನಾಯರ್, ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾನತ್ತಿಲ, ದೇವತಾರಾಧನ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ ಕಕೆಬೆಟ್ಟು, ಗಣೇಶೋತ್ಸವ ಸಮಿತಿ ಕೋಶಾಧಿಕಾರಿ ಅಪ್ಪಯ್ಯ ಸೂಂತೋಡು, ಸಂಚಾಲಕ ರಾಘವ ಬಿ.ರಾವ್, ದೇವತಾರಾಧನ ಸಮಿತಿ ಕೋಶಾಧಿಕಾರಿ ಜಯಪ್ರಕಾಶ್ ಉರುಂಡೆ, ಮಿತ್ತೂರು ಜೋಡುದೈವಗಳ ಆಡಳಿತ ಮೊಕ್ತೇಸರರಾದ ವೆಂಕಟ್ರಮಣ ಗೌಡ ಕೆದಂಬಾಡಿ, ಉಬರಡ್ಕ ಮಿತ್ತೂರು ಪ್ರಾ.ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಸಮಿತಿಯ ಸದಸ್ಯರು, ನಂದಿನಿ ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.