ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ, ಸುಳ್ಯ ನಗರ ಇದರ ವತಿಯಿಂದ ವರಮಹಾಲಕ್ಷ್ಮೀ ಪೂಜೆ ಸಂಪನ್ನ

0


ಆ. 25 ರಂದು ಸುಳ್ಯ ನಗರ ವಿಶ್ವ ಹಿಂದೂ ಪರಿಷತ್ ಹಾಗೂ ವರಮಹಾಲಕ್ಷ್ಮಿ ಉತ್ಸವ ಸಮಿತಿ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಪುರೋಹಿತ್ ನಾಗರಾಜ್ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿ ಕೊಟ್ಟರು. ಕಾರ್ತಿಕೇಯ ಮಹಿಳಾ ಭಜನಾ ಮಂಡಳಿ ಅಡ್ಕರ್ ಇವರಿಂದ ಕುಣಿತ ಭಜನೆ ನಡೆಸಲಾಯಿತು. ಸಾಮೂಹಿಕ ಲಲಿತಾ ಸಹಸ್ರ ನಾಮ ಪಠಣ ನಡೆಯಿತು. ಉತ್ಸವ ಸಮಿತಿ ಅಧ್ಯಕ್ಷೆ ಶ್ರೀಮತಿ ನಮಿತಾ ರಾವ್ ಪೂಜಾ ನೇತೃತ್ವ ವಹಿಸಿದರು. ಮಹಾಮಂಗಳಾರತಿ ನಂತರ ಅನ್ನಪ್ರಸಾದ ವಿತರಿಸಲಾಯ್ತು. ಸಾವಿರಾರು ಜನ ಪೂಜಾ ಕಾರ್ಯಕ್ರಮದ ಯಶಸ್ವಿಗೆ ಸಾಕ್ಷಿಯಾದರು.