ದುಗ್ಗಲಡ್ಕ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಬಿಡುಗಡೆ

0


ದುಗ್ಗಲಡ್ಕದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ವನ್ನು ಬಿಡುಗಡೆಗೊಳಿಸಲಾಯಿತು.
ದುಗ್ಗಲಡ್ಕದ ಅಯ್ಯಪ್ಪ ಭಜನಾ ಮಂದಿರದಲ್ಲಿ ಪೂಜೆ ಸಲ್ಲಿಸಿ, ದುಗ್ಗಲಾಯ ದೈವಸ್ಥಾನದಲ್ಲಿ ಆಮಂತ್ರಣ ಬಿಡುಗಡೆ ಮಾಡಲಾಯಿತು.


ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ರಾಘವೇಂದ್ರ ಭಟ್ ಕಲ್ದಂಬೆ, ಅಧ್ಯಕ್ಷ ಸುಂದರ ರಾವ್, ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷರಾದ ಯತೀಶ್ ರೈ ದುಗ್ಗಲಡ್ಕ,ಬಾಬು ಮಣಿಯಾಣಿ, ನಾರಾಯಣ ಮಣಿಯಾಣಿ, ಗಿರೀಶ್ ರೈ ಮೂಡೆಕಲ್ಲು, ಅಧ್ಯಕ್ಷ ಶಿವಪ್ರಸಾದ್ ಕುದ್ಪಾಜೆ, ಕಾರ್ಯದರ್ಶಿ ಸುರೇಶ್ ಮೂಡೆಕಲ್ಲು, ಕೋಶಾಧಿಕಾರಿ ಶೇಷಪ್ಪ ರೈ ದುಗ್ಗಲಡ್ಕ, ಯುವಸೇವಾ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ್,ಲತೀಶ್ ದುಗ್ಗಲಡ್ಕ, ಜಯರಾಮ್ ದುಗ್ಗಲಡ್ಕ ಮೊದಲಾದವರು ಉಪಸ್ಥಿತರಿದ್ದರು.
ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭಾಗವಹಿಸಲಿದ್ದಾರೆ.