p>

ಮುಳಿಯ ಗಾನರಥ ಸೀಸನ್ -1ಗ್ರ್ಯಾಂಡ್ ಫಿನಾಲೆಯ

0

ಜೂನಿಯರ್ ವಿಭಾಗದಲ್ಲಿ ಪಲ್ಲವಿ ಕೆ.ಆರ್.ಗೆ ಪ್ರಥಮ ಪ್ರಶಸ್ತಿ

ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ಯಾಂಡ್ ಫಿನಾಲೆಯಲ್ಲಿ ಜೂನಿಯರ್ ವಿಭಾಗದಲ್ಲಿ ಪಲ್ಲವಿ ಕೆ‌.ಆರ್.ಪ್ರಥಮ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಈ ಕಾರ್ಯಕ್ರಮ ಆ.26ರಂದು ಪುತ್ತೂರಿನ ಜೈನ ಭವನದಲ್ಲಿ ನಡೆಯಿತು. ಪ್ರಥಮ ಪ್ರಶಸ್ತಿ ವಿಜೇತರಿಗೆ ಚಿನ್ನದ ನಾಣ್ಯ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಪಲ್ಲವಿಯವರು ಮಂಗಳೂರಿನಲ್ಲಿ ವಾಸ್ತವ್ಯ ವಿರುವ ಅಮರಮೂಡ್ನೂರು ಗ್ರಾಮದ ಕೊಂಡೆಬಾಯಿ ರಾಮಣ್ಣ ಗೌಡ- ಅನಿತಾ ದಂಪತಿಯ ಪುತ್ರಿ.ಪ್ರಸ್ತುತ ಮಂಗಳೂರಿನ ತ್ರಿಶಾ ಕಾಲೇಜಿನ ವಿದ್ಯಾರ್ಥಿನಿ.