ಬೆಳ್ಳಾರೆ: ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ. 29ರಂದು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ಅಸೆಂಬ್ಲಿಯಲ್ಲಿ ಪ್ರಾಂಶುಪಾಲರಾದ ಟಿ.ಎಮ್ ದೇಚಮ್ಮ ಶುಭ ಹಾರೈಸಿದರು. ವಿದ್ಯಾರ್ಥಿನಿ ಕು. ಮಾನ್ಯ ಕ್ರೀಡಾ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ರಾಜ್ಯ ಮಟ್ಟದ ಚೆಸ್ ನಲ್ಲಿ ಚಾಂಪಿಯನ್ ಶಿಪ್ ಪಡೆದ ಶಾಲಾ ವಿದ್ಯಾರ್ಥಿ ರವೀಶ್ ಕೋಟೆ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಓಣಂ ಆಚರಣೆಯನ್ನೂ ಇದೇ ಸಂದರ್ಭದಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳು “ಪೂಕಳಂ” ತಯಾರಿಸಿ ಸಂಭ್ರಮಿಸಿದರು.
ಮಧ್ಯಾಹ್ನದ ನಂತರ ಶಾಲಾ ವಿದ್ಯಾರ್ಥಿಗಳಿಗಾಗಿ ಹಗ್ಗ ಜಗ್ಗಾಟ ಮತ್ತು ತ್ರೋಬಾಲ್ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಶಾಲಾ ದೈಹಿಕ ಶಿಕ್ಷಕ ಜಯಪ್ರಕಾಶ್ ಕುಡೆಕಲ್ಲು ಮತ್ತು ಶಿಕ್ಷಕಿ ಗೀತಾ ಸ್ಪರ್ಧೆಗಳನ್ನು ನಡೆಸಿಕೊಟ್ಟರು.