ಪೆರುವಾಜೆ : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

0

ನೂರಾರು ಫಲಾನುಭವಿಗಳು ಭಾಗಿ, ಕಾರ್ಯಕ್ರಮ ವೀಕ್ಷಣೆ

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯು ಅನುಷ್ಠಾನಗೊಂಡಿದ್ದು ಇಂದು ಪೆರುವಾಜೆ ಗ್ರಾ.ಪಂ. ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಚಾಲನೆ ನೀಡಿದರು.

ಸದಸ್ಯ ಸಚಿನ್ ರಾಜ್ ಶೆಟ್ಟಿ ಸರಕಾರದ ಯೋಜನೆಗಳ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ, ಉಪಾಧ್ಯಕ್ಷೆ ಶಹಿನಾಜ್, ಸದಸ್ಯರು,ಸಿಬ್ಬಂದಿ ವರ್ಗದವರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

ಎಲ್.ಇ.ಡಿ.ಪರದೆಯ ಮೂಲಕ ಮುಖಾಂತರ ಫಲಾನುಭವಿಗಳಿಗೆ ಕಾರ್ಯಕ್ರಮ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
.