ಸುಬ್ರಹ್ಮಣ್ಯ ಗ್ರಾ.ಪಂ: ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ*

0

ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ ಇಂದು ರಾಜ್ಯದಾದ್ಯಂತ ಅನುಷ್ಠಾನಗೊಳ್ಳಲಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ. ನ ಕುಮಾರಧಾರ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಪ್ರೋಜೆಕ್ಟರ್ ಮುಖಾಂತರ ನೋಡುವ ವ್ಯವಸ್ಥೆ ಮಾಡಲಾಗಿತ್ತು.

ಗ್ರಾ.ಪಂ ಅಧ್ಯಕ್ಷೆ ಸುಜಾತಾ ಕಲ್ಲಾಜೆ ಹಾಗೂ ಫಲಾನುಭವಿ ರಾಧಾ ದೋಣಿಮಕ್ಕಿ ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ಉಪಾಧ್ಯಕ್ಷ ವೆಂಕಟೇಶ್ ಎಚ್. ಎಲ್,ಸದಸ್ಯರುಗಳಾದ ಅಗ್ರಹಾರ ನಾರಾಯಣ, ಗಿರೀಶ್ ಆಚಾರ್ಯ, ಭಾರತಿ ದಿನೇಶ್, ದಿಲೀಪ್, ಮೋಹನ್. ಕೆ, ಶ್ರೀಮತಿ ಸೌಮ್ಯ, ಶಿವರಾಮ ನೆಕ್ರಾಜೆ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ,ಗ್ರಾಮ ಪಂಚಾಯಿತ್ ಮಾಜಿ ಉಪಾಧ್ಯಕ್ಷ ಶಿವರಾಮ್ ರೈ ಮತ್ತಿತರರು ಉಪಸ್ಥಿತರಿದ್ದರು.

ಪಂಚಾಯತ್ಅಭಿವೃದ್ಧಿ ಅಧಿಕಾರಿ ಆಕಾಶ್. ಕೆ.ಸ್ವಾಗತಿಸಿದರು. ಭಾರತಿ ದಿನೇಶ್ ವಂದಿಸಿದರು. ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ ಕಾರ್ಯಕ್ರಮ ನಿರೂಪಿಸಿದರು.