ಕಲ್ಮಕಾರು ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಕಲ್ಮಕಾರು ಸ. ಹಿ.ಪ್ರಾ.ಶಾಲೆಯಲ್ಲಿ ಆ.29 ರಂದು ನಡೆಯಿತು.


ಎಸ್. ಡಿ.ಎಂ.ಸಿ ಅಧ್ಯಕ್ಷ ಬೆಳ್ಯಪ್ಪ ಗೌಡ ಬಹುಮಾನ ವಿತರಿಸಿದರು. ಮುಖ್ಯ ಶಿಕ್ಷಕಿ ಮಾಲಿನಿ ಲೋಕೇಶ್, ಎಸ್. ಡಿ.ಎಂ.ಸಿ.ಯ ವೀಣಾನಂದ, ಚಂದ್ರಶೇಖರ, ರಾಜೀವ, ಸುಷ್ಮಾ ಗಡಿಕಲ್ಲು, ದೀಪಾ ಗಡಿಕಲ್ಲು, ಶಿಕ್ಷಕಿಯರಾದ ಸುಕನ್ಯಾ, ಜ್ಯೋತಿ, ಸುದ್ದಿ ಪತ್ರಿಕೆಯ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ವರದಿಗಾರ ದಯಾನಂದ ಕೊರತ್ತೋಡಿ ಉಪಸ್ಥಿತರಿದ್ದರು. ಸುದ್ದಿ ಬಿಡುಗಡೆ ವರದಿಗಾರ ಶಿವರಾಮ ಕಜೆಮೂಲೆ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಮಾಲಿನಿ ಕಾರ್ಯಕ್ರಮ ನಿರ್ವಹಿಸಿದರು.