ಹರಿಹರ ಪಲ್ಲತಡ್ಕ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಹರಿಹರ ಪಲ್ಲತಡ್ಕ ಸ. ಹಿ.ಪ್ರಾ.ಶಾಲೆಯಲ್ಲಿ ಆ.29 ರಂದು ನಡೆಯಿತು.


ಮುಖ್ಯೋಪಾಧ್ಯಾಯ ಶೇಷಪ್ಪ ಗೌಡ ಬಹುಮಾನ ವಿತರಿಸಿದರು. ಸಹ ಶಿಕ್ಷಕಿಯರಾದ ದೇವಕಿ ನೆತ್ತಾರ, ಜಶ್ಮಿನಿ ಕೆ.ಎಸ್, ಮಲ್ಲಿಕಾ, ಭವ್ಯ, ಸುದ್ದಿ ಪತ್ರಿಕೆಯ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ವರದಿಗಾರ ದಯಾನಂದ ಕೊರತ್ತೋಡಿ ಉಪಸ್ಥಿತರಿದ್ದರು. ವರದಿಗಾರ ಶಿವರಾಮ ಕಜೆಮೂಲೆ ಪ್ರಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ದೇವಕಿ ನೆತ್ತಾರ ಕಾರ್ಯಕ್ರಮ ನಿರ್ವಹಿಸಿದರು.