ಯುವಕನ ಮೇಲೆ ಹಲ್ಲೆ ಪ್ರಕರಣದ ಬಜರಂಗದಳ ಕಾರ್ಯಕರ್ತರಿಗೆ ನಿರೀಕ್ಷಣಾ ಜಾಮೀನು ಮಂಜೂರು

0

ಅರಂತೋಡು ತೊಡಿಕಾನದ ಅಡ್ಯಡ್ಕ ಎಂಬಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೇಲೆ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಕೇಸು ದಾಖಲಾಗಿದ್ದ ಬಜರಂಗದಳ ಕಾರ್ಯಕರ್ತರಿಗೆ ನಿರೀಕ್ಷಣಾ ಜಾಮೀನು ಮಂಜೂರು ಗೊಂಡಿರುವುದಾಗಿ ತಿಳಿದು ಬಂದಿದೆ.


ಹಲ್ಲೆ ಪ್ರಕರಣದಲ್ಲಿ ಲತೀಶ್ ಗುಂಡ್ಯ ಮತ್ತು ವರ್ಷಿತ್ ಕೆ.ಪಿ ಯವರ ಮೇಲೆ ಕೇಸು ದಾಖಲಾಗಿತ್ತು. ಪ್ರಕರಣದ ಇಬ್ಬರು ಆರೋಪಿಗಳು ಪುತ್ತೂರಿನ ನ್ಯಾಯಾಲಯದಲ್ಲಿ ಹಾಜರಾಗಿದ್ದು ನ್ಯಾಯಾಲಯವು 50 ಸಾವಿರ ಬಾಂಡ್ ನೊಂದಿಗೆ ಜಾಮೀನು ಮಂಜೂರುಗೊಳಿಸಿದೆ.

ಆರೋಪಿಗಳ ಪರವಾಗಿ ನ್ಯಾಯವಾದಿ ಮಾಧವ ಪೂಜಾರಿ ಯವರು ವಾದಿಸಿದ್ದರು.