ಸೆ.7: ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಮೊಸರು ಕುಡಿಕೆ ಉತ್ಸವ

0

ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.7ರಂದು ಜರುಗಲಿದ್ದು, ಈ ಬಾರಿ ವಿಶೇಷ ಆಕರ್ಷಣೆಯಾಗಿ ಗೋಪುರ ಮಡಿಕೆ ಒಡೆಯುವ ಸ್ಪರ್ಧೆ ಜರುಗಲಿದೆ.

ಬೆಳಿಗ್ಗೆ ಪೂಜಾ ಕಾರ್ಯಕ್ರಮ, ಬಳಿಕ ವಿವಿಧ ಸ್ಪರ್ಧೆಗಳು, ಅನ್ನಪ್ರಸಾದ, ಸಂಜೆ ಭಜನಾ ಕಾರ್ಯಕ್ರಮ, ಮಂಗಳಾರತಿ, ರಾತ್ರಿ ಶ್ರೀ ರಾಮಾಶ್ವಮೇಧ ಯಕ್ಷಗಾನ ಜರುಗಲಿದ್ದು, ಬಳಿಕ ಗೋಪುರ ಮಡಿಕೆ ಒಡೆಯುವ ಕಾರ್ಯಕ್ರಮ ನಡೆಯಲಿದೆ.