ಸೆ.6: ಜಾಲ್ಸೂರಿನಲ್ಲಿ 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ

0

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಪಯಸ್ವಿನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಸೆ.6ರಂದು ಜರುಗಲಿದೆ.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ನಿಶಾಂತ್ ಮೋಂಟಡ್ಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಎಲ್ಲಾ ಸ್ಪರ್ಧೆಗಳು ಜಾಲ್ಸೂರು ಗ್ರಾಮಸ್ಥರಿಗೆ ಮಾತ್ರ ಮೀಸಲಾಗಿದ್ದು, ಅಂಗನವಾಡಿ ಪುಟಾಣಿಗಳಿಗೆ ಕಪ್ಪೆ ಜಿಗಿತ, ಕಾಳು ಹೆಕ್ಕುವುದು, ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಪ್ಪೆ ಜಿಗಿತ, ಬಲೂನ್ ಒಡೆಯುವುದು, ಬಕೆಟ್ ಗೆ ಬಾಲ್ ಹಾಕುವುದು, ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಾಲಕರಿಗೆ ಕಬಡ್ಡಿ, ಮೂರು ಕಾಲಿನ ಓಟ, ಬಾಲಕಿಯರಿಗೆ ಸಂಗೀತ ಕುರ್ಚಿ, ಮೂರು ಕಾಲಿನ ಓಟ, ಪ್ರೌಢಶಾಲಾ ಬಾಲಕರಿಗೆ ಕಬಡ್ಡಿ, ಮಡಿಕೆ ಒಡೆಯುವುದು, ಬಾಲಕಿಯರಿಗೆ ಮೂರು ಕಾಲಿನ ಓಟ, ಸಂಗೀತ ಕುರ್ಚಿ, ಸಾರ್ವಜನಿಕ ವಿಭಾಗದಲ್ಲಿ ಪುರುಷರಿಗೆ ಮಡಿಕೆ ಒಡೆಯುವುದು, ಕಬಡ್ಡಿ, ಹಗ್ಗಜಗ್ಗಾಟ , ಮಹಿಳೆಯರಿಗೆ ಮಡಿಕೆ ಒಡೆಯುವುದು, ಹಗ್ಗಜಗ್ಗಾಟ ನಡೆಯಲಿದೆ.
ಸಂಜೆ ನಡೆಯುವ ಸಮಾರೋಪದಲ್ಲಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾರಾಯಣ ಬೊಮ್ಮೆಟ್ಟಿ ಅವರು ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಿಸಲಿದ್ದಾರೆ. ಸಹಕಾರಿ ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು ಅವರು ಉಪಸ್ಥಿತರಿರಲಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ರಾತ್ರಿ 7ರಿಂದ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ ಜರುಗಲಿದೆ.