ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಸೆ.೨ ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಅಷ್ಟಮಿ ಪ್ರಯುಕ್ತ ಪುಟಾಣಿಗಳಿಗೆ ಮುದ್ದು ಕೃಷ್ಣ, ಬಾಲಾ ಕೃಷ್ಣ ಹಾಗೂ ಯಶೋಧಾ ಕೃಷ್ಣ ಸ್ಪರ್ಧೆ ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ರೂಪ ಜೆ ರೈ ಹಾಗೂ ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಹಾಗೂ ಖಜಾಂಜಿ ತೇಜಸ್ವಿನಿ ಕಿರಣ್ ಇವರು ದೀಪ ಬೆಳಗಿಸಿ ಶಿಶು ಕೃಷ್ಣನ ತೊಟ್ಟಿಲನ್ನು ತೂಗುವ ಮೂಲಕ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶುಭಕರ ಬಿ.ಸಿ. ಕೃಷ್ಣ ಜನ್ಮಾಷ್ಟಮಿ ಯ ಶುಭಾಶಯಗಳನ್ನು ಕೋರಿದರು. ಪುಟಾಣಿ ಕೃಷ್ಣಗಳೆಲ್ಲರೂ ಹೆಜ್ಜೆ ಹಾಕಿದರು. ಪೋಷಕರಿಗೆ ಮಡಕೆ ಒಡೆಯುವ ಸ್ಪರ್ಧೆ ಹಾಗೂ ತೆಂಗಿನಕಾಯಿ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ ಟಿ.ಜಿ, ಪೋಷಕರ ಪ್ರತಿನಿಧಿಗಳಾದ ಶ್ರೀಮತಿ ಶಿಲ್ಪಾ ಹಾಗೂ ಶುಶಾನ್, ಸಂಸ್ಥೆಯ ಟ್ರಸ್ಟಿಗಳಾದ ಚೇತನ್ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕಿ ಶ್ರೀಮತಿ ನಿರ್ಮಲ ಕಾರ್ಯಕ್ರಮ ನಿರೂಪಿಸಿದರು.