ಸೆ.6: ಗುತ್ತಿಗಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಶ್ರೀ ಕೃಷ್ಣ ಭಜನಾ ಮಂದಿರ ಗುತ್ತಿಗಾರು ಹಾಗೂ ಯುವಕ ಮಂಡಲ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ಸೆ.6 ರಂದು ಗುತ್ತಿಗಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ. ಶ್ರೀ ಕೃಷ್ಣ ಭಜನಾ ಮಂದಿರ ಗುತ್ತಿಗಾರು ವಠಾರದಲ್ಲಿ ನಡೆಯಲಿದ್ದು ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಿವೃತ್ತ ಅಬಕಾರಿ ನಿರೀಕ್ಷಕ ವೀರಪ್ಪ ಗೌಡ ಅಮೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ರವಿಪ್ರಕಾಶ್ ಬಳ್ಳಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ಪಶು ವೈದ್ಯಾಧಿಕಾರಿ ವೆಂಕಟಾಚಲಪತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗುಲಾಬಿ, ಅಂಗನವಾಡಿ ಸಹಾಯಕಿ ಶ್ರೀಮತಿ ಸೀತಮ್ಮ ಬಿ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ದಿನವಿಡೀ ವಿವಿಧ ಸ್ಪರ್ಧೆಗಳು ನಡೆಯಲಿದ್ದು ಸಾರ್ವಜನಿಕ ಪುರುಷರಿಗೆ ಮೊಸರು ಕುಪುರುಷರಿಗೆ, ಮಹಿಳೆಯರಿಗೆ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಯಲಿದೆ. ಅಪರಾಹ್ನ 2.30 ರಿಂದ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ.